ಬಂಟ್ವಾಳ :ಸದಾಶಿವ ಶಿಕ್ಷಣ ಪ್ರತಿಷ್ಠಾನ ರಿ ಇದರ ಅಶ್ರಯದಲ್ಲಿ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ನೆತ್ತರಕೆರೆಯಲ್ಲಿ ಶೀಘ್ರದಲ್ಲಿ ಆರಂಭಗೊಳ್ಳಲಿರುವ ನೂತನ ವಿದ್ಯಾಸಂಸ್ಥೆಯ ನಾಮಕರಣ ಹಾಗೂ ಲಾಂಛನ ಬಿಡುಗಡೆ ಸಮಾರಂಭವು ಅ. 22ರಂದು ಬುಧವಾರ ಬೆಳಿಗ್ಗೆ ಬೆಂಜನಪದವು ಶುಭಲಕ್ಷ್ಮಿ ಸಭಾಂಗಣದಲ್ಲಿ ನಡೆಯಿತು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಶ್ರೀ ಕ್ಷೇತ್ರ ಒಡಿಯೂರು ಇವರು ನೂತನ ವಿದ್ಯಾ ಸಂಸ್ಥೆಗೆ “ಎಡ್ವೆಂಚರ್” (EDUVENTURE) ಎನ್ನುವ ನಾಮಕರಣದೊಂದಿಗೆ ಸಂಸ್ಥೆಯ ಲಾಂಛನ ಬಿಡುಗಡೆ ಮಾಡಿದರು, ಬಳಿಕ ಆಶೀರ್ವಾಚನ ನೀಡಿ, ಕ್ಷಣ ಕ್ಷಣ ಕಲಿಯುವುದೇ ಶಿಕ್ಷಣ, ಶಿಕ್ಷಣದಿಂದ ಮಾತ್ರ ಪ್ರಜ್ಞಾವಂತ ಸಮಾಜ ನಿರ್ಮಾಣ ಸಾದ್ಯ ನೈತಿಕ ಮೌಲ್ಯ ತುಂಬಿದ ಶಿಕ್ಷಣದ ಅನಿವಾರ್ಯತೆ ಹಾಗೂ ಅಗತ್ಯತೆ ಪ್ರಸ್ತುತ ಕಾಲದ ತುರ್ತು, ಬದುಕು ಯಾವಾಗಲೂ ಜೇನಿನಂತಿರಬೇಕು ಸಾತ್ವಿಕ ಸ್ವಭಾವ, ಅರ್ಪಣಾ ಮನೋಭಾವ ಕಠಿಣ ಪರಿಶ್ರಮವಿದ್ದರೆ ಯಾವುದೇ ಸಾಧನೆ ಮಾಡಲು ಸಾಧ್ಯ ಎಂದು ಅಮೃತ್ ರೈ ಯವರ ತಂಡ ತೊರಿಸಿಕೊಟ್ಟಿದ್ದಾರೆ, ಸಂಸ್ಥೆಯ ಆಶಯ ಸಕಾರವಾಗಲಿ, ನೂತನ ವಿದ್ಯಾ ಸಂಸ್ಥೆಗೆ ಉತ್ತಮ ಭವಿಷ್ಯವಿರಲಿ ಎಂದು ಶುಭ ಆಶೀರ್ವಾಚನವಿತ್ತರು.
ಮುಖ್ಯ ಅತಿಥಿ ಮಾಜಿ ಸಚಿವ ಬಿ ರಮಾನಾಥ ರೈಯವರು ನೂತನ ವಿದ್ಯಾಸಂಸ್ಥೆಯ ವೆಬ್ಸೈಟ್ ಗೆ ಚಾಲನೆ ನೀಡಿ, ಸಂಸ್ಥೆಯ ಬ್ರೋಶರ್ ಬಿಡುಗಡೆಗೊಳಿಸಿ ಮಾತನಾಡಿ, ಹಿಂದೆ ದುರ್ಬಲ ವರ್ಗದ ಜನರು ಶಿಕ್ಷಣದಿಂದ ವಂಚಿತರಗಿದ್ದರು, ಈಗ ಶಿಕ್ಷಣ ನಮ್ಮೆಲ್ಲರ ಹಕ್ಕು ಆಗಿದೆ, ನೂತನ ವಿದ್ಯಾ ಸಂಸ್ಥೆ ಎಲ್ಲಾ ಸವಲತ್ತುಗಳನ್ನೋಳಗೊಂಡ, ಸುಂದರ ವಿದ್ಯಾದಾನ ಮಾಡುವ ತಾಣವಾಗಿ ಅತೀ ಎತ್ತರಕ್ಕೆ ಏರಲಿ, ಸುಂದರ ಸುಶಿಕ್ಷಿತ ಸಮಾಜ ನಿರ್ಮಾಣಕ್ಕೆ ಸಂಸ್ಥೆ ಪೂರಕವಾಗಲಿ, ಸಂಸ್ಥೆಯಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ಸಿಗಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ರಮಾನಾಥ ರೈ ಅವರನ್ನು ಸಂಸ್ಥೆಯ ಪರವಾಗಿ ಗೌರವಿಸಿ ಸನ್ಮಾನಿಸಲಾಯಿತು.
ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು.
ಸದಾಶಿವ ಶಿಕ್ಷಣ ಪ್ರತಿಷ್ಠಾನ (ರಿ)ಇದರ ಅಧ್ಯಕ್ಷ ಹಾಗೂ ನೂತನ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಅಮೃತ್ ಯು ರೈ ಪ್ರಾಸ್ತವಿಕವಾಗಿ ಮಾತನಾಡಿ, ನೂತನ
ವಿದ್ಯಾ ಸಂಸ್ಥೆ ಹಲವಾರು ವಿಶೇಷತೆಗಳನ್ನು ಹೊಂದಿದ್ದು, ಅತ್ಯಾಧುನಿಕ ಶಿಕ್ಷಣಕ್ಕೆ ಪೂರಕವಾಗುವಂತಹ ಮತ್ತು ಸರ್ವ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒಂದೇ ಸೂರಿನಡಿ ತರಬೇತಿ ನೀಡುವ ಸೌಲಭ್ಯವಿದೆ ಎಂದು ಹೇಳಿ ಸರ್ವರ ಪ್ರೋತ್ಸಾಹ ಹಾಗೂ ಸಹಕಾರವನ್ನು ಸ್ಮರಿಸಿದರು.
ವಿದ್ಯಾಸಂಸ್ಥೆಯ ನೂತನ ಪ್ರಾಂಶುಪಾಲರಾದ ಮಹೇಶ್ ಕೆ ಎನ್ ಪುತ್ತೂರು ಮಾತನಾಡಿ, ನೂತನ ಸಂಸ್ಥೆಯ ಉದ್ದೇಶ ಮುಂದಿನ ಕಾರ್ಯ ಯೋಜನೆ ಹಾಗೂ ಯೋಚನೆಗಳ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕಳ್ಳಿಗೆ ಗ್ರಾ ಪಂ ಅಧ್ಯಕ್ಷ ಪುರುಷೋತ್ತಮ ಕೊಟ್ಟಾರಿ, ಸದಾಶಿವ ಪ್ರತಿಷ್ಠಾನದ ಕಾರ್ಯದರ್ಶಿ ರಕ್ಷಿತಾ ಅಮೃತ್ ರೈ, ಕೋಶಾಧಿಕಾರಿ ಅಶ್ವಥ್, ಟ್ರಸ್ಟಿ ಬಿ ಮೋಹನ್ ಕುಮಾರ್ ಉಪಸ್ಥಿತರಿದ್ದರು.
ನೂತನ ವಿದ್ಯಾ ಸಂಸ್ಥೆಯ ವಿಶೇಷತೆಯನ್ನೋಳಗೊಂಡ ಸಂಪೂರ್ಣ ಮಾಹಿತಿಯನ್ನು ಎಲ್ ಇ ಡಿ ಪರದೆಯಲ್ಲಿ ಪ್ರದರ್ಶಿಸಲಾಯಿತು
ಸದಾಶಿವ ಪ್ರತಿಷ್ಠಾನದ ಟ್ರಸ್ಟಿ ಸಮತಾ ಕೆ ಜೆ ಸ್ವಾಗತಿಸಿ, ಟ್ರಸ್ಟಿ ದೀಪಿಕಾ ಸಂದೇಶ್ ಧನ್ಯವಾದವಿತ್ತರು, ಸತೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
ವಿದ್ಯಾಸಂಸ್ಥೆಯ ನೂತನ ಪ್ರಾಂಶುಪಾಲರಾದ ಮಹೇಶ್ ಕೆ ಎನ್ ಪುತ್ತೂರು ಮಾತನಾಡಿ, ನೂತನ ಸಂಸ್ಥೆಯ ಉದ್ದೇಶ ಮುಂದಿನ ಕಾರ್ಯ ಯೋಜನೆ ಹಾಗೂ ಯೋಚನೆಗಳ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕಳ್ಳಿಗೆ ಗ್ರಾ ಪಂ ಅಧ್ಯಕ್ಷ ಪುರುಷೋತ್ತಮ ಕೊಟ್ಟಾರಿ, ಸದಾಶಿವ ಪ್ರತಿಷ್ಠಾನದ ಕಾರ್ಯದರ್ಶಿ ರಕ್ಷಿತಾ ಅಮೃತ್ ರೈ, ಕೋಶಾಧಿಕಾರಿ ಅಶ್ವಥ್, ಟ್ರಸ್ಟಿ ಬಿ ಮೋಹನ್ ಕುಮಾರ್ ಉಪಸ್ಥಿತರಿದ್ದರು.
ನೂತನ ವಿದ್ಯಾ ಸಂಸ್ಥೆಯ ವಿಶೇಷತೆಯನ್ನೋಳಗೊಂಡ ಸಂಪೂರ್ಣ ಮಾಹಿತಿಯನ್ನು ಎಲ್ ಇ ಡಿ ಪರದೆಯಲ್ಲಿ ಪ್ರದರ್ಶಿಸಲಾಯಿತು
ಸದಾಶಿವ ಪ್ರತಿಷ್ಠಾನದ ಟ್ರಸ್ಟಿ ಸಮತಾ ಕೆ ಜೆ ಸ್ವಾಗತಿಸಿ, ಟ್ರಸ್ಟಿ ದೀಪಿಕಾ ಸಂದೇಶ್ ಧನ್ಯವಾದವಿತ್ತರು, ಸತೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.



